ಚಿಕ್ಕಮಗಳೂರು : ಶೃಂಗೇರಿ ಶಾರದಾ ಪೀಠದಲ್ಲಿ ಜಗದ್ಗುರು ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಜಿಗಳ 71 ನೇ ವರ್ಧಂತಿ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ಏರ್ಪಡಿಸಿರುವ ಆಯುತ ಚಂಡೀ ಮಹಾಯಾಗದಲ್ಲಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಪಾಲ್ಗೊಂಡಿದ್ದಾರೆ.
ಸುಮಾರು 11:15 ರ ಸುಮಾರಿಗೆ ಹೆಲಿಕಾಪ್ಟರ್ ಮೂಲಕ ಶೃಂಗೇರಿಗೆ ಆಗಮಿಸಿದ ಸಚಿವರನ್ನು ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಡಿ. ಎನ್ ಜೀವರಾಜ್, ಶೃಂಗೇರಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಹರೀಶ್ ವಿ ಶೆಟ್ಟಿ ಬರಮಾಡಿಕೊಂಡರು. ನಂತರ ಶೃಂಗೇರಿ ಮಠಕ್ಕೆ ತೆರಳಿ ಉಭಯ ಜಗದ್ಗುರುಗಳ ಆಶಿರ್ವಾದ ಪಡೆದ ಬಳಿಕ ವರ್ಧಂತಿ ಮಹೋತ್ಸವ ಹಿನ್ನಲೆ ಏರ್ಪಡಿಸಿದ್ದ ಆಯುತ ಚಂಡೀ ಮಹಾಯಾಗದ ಪೂರ್ಣಾಹುತಿಯಲ್ಲಿ ಪಾಲ್ಗೊಂಡರು.



0 Comments