ರಾಜ್ಯದಲ್ಲಿ 14 ದಿನದ ಲಾಕ್ ಡೌನ್ ಜಾರಿಯಲ್ಲಿದ್ದು ಪಾಸಿಟಿವ್ ಕೇಸುಗಳು ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ. ಚಿಕ್ಕಮಗಳೂರು ಜಿಲ್ಲೆಯಲ್ಲೂ ಕೊರೋನಾ ಕೇಸ್ ಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಏರಿಕೆ ಕಂಡುಬರುತ್ತಿದೆ. 

ನಿನ್ನೆ 5 ಸಾವು ಸಂಭವಿಸಿದ್ದಲ್ಲದೆ ಒಟ್ಟು ದಾಖಲೆಯ 542 ಪ್ರಕರಣ ದಾಖಲಾಗಿದ್ದವು. ಇಂದೂ ಜಿಲ್ಲೆಯಲ್ಲಿ ಒಟ್ಟು ದಾಖಲೆಯ 500 ಕೇಸ್ ಗಳು ಪತ್ತೆಯಾಗಿದ್ದು, 4 ಸಾವು ಸಹ ಸಂಭವಿಸಿದೆ.

ಇಂದು ಒಟ್ಟು 142 ರೋಗಿಗಳು ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿರುತ್ತಾರೆ.

ತಾಲ್ಲೂಕುವಾರು ನೋಡಿದಾಗ 

  • ಚಿಕ್ಕಮಗಳೂರು 109
  • ಶೃಂಗೇರಿ 93
  • ಮೂಡಿಗೆರೆ 104

 www.newsmalnad.com 

  • ಕೊಪ್ಪ 38
  • ಎನ್ ಆರ್ ಪುರ 34
  • ತರೀಕೆರೆ 50
  • ಕಡೂರು 72

ಹೀಗೆ ಒಟ್ಟು 500 ಪ್ರಕರಣಗಳು ದಾಖಲಾಗಿವೆ.

ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ.

18ವರ್ಷ ಮೇಲ್ಪಟ್ಟವರು www.cowin.gov.in ಹಾಗೂ ಆರೋಗ್ಯ ಸೇತು, ಉಮಂಗ್ ಆಪ್ ನ ಮೂಲಕ ರಿಜಿಸ್ಟರ್ ಮಾಡಿಕೊಂಡು ವ್ಯಾಕ್ಸಿನ್ ತೆಗೆದುಕೊಳ್ಳೀ.

ಅದಕ್ಕೂ ಮೊದಲು ರಕ್ತದಾನ ಮಾಡುವುದನ್ನು ಮರೆಯಬೇಡಿ. ಭಯ ಬೇಡ ಎಚ್ಚರಿಕೆ ಇರಲಿ