ಲಕ್ಷಾಂತರ ರೂಪಾಯಿ ಬೆಲೆಬಾಳುವ ಸುಮಾರು 96 ಮರಗಳನ್ನು ಅಕ್ರಮವಾಗಿ ಕಡಿದ ಪ್ರಕರಣ ಕಳಸದ ಬಾಳುರು ಮೀಸಲು ಅರಣ್ಯ ಪ್ರದೇಶ ವ್ಯಾಪ್ತಿಯ ಹಲಕಡಕದಲ್ಲಿ ಬೆಳಕಿಗೆ ಬಂದಿದೆ.

ಈ ಪ್ರಕರಣದಲ್ಲಿ ಕಳಸ ವಲಯದ ಅರಣ್ಯ ಸಂರಕ್ಷಾಧಿಕಾರಿಯಾದ ಜೆ. ವಿಜಯಕುಮಾರ್ ಭಾಗಿಯಾಗಿದ್ದಾರೆ, ಎಂಬ ಗ್ರಾಮಸ್ಥರ ದೂರಿನ ಮೇರೆಗೆ ವಲಯ ಅರಣ್ಯಾಧಿಕಾರಿಯಾದ ವಿಜಯಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸಮಗ್ರ ತನಿಖೆನಡೆಸಿ ಮೇಲಧಿಕಾರಿಗಳಿಗೆ ವರದಿಯನ್ನು ಸಲ್ಲಿಸಿದ್ದರು. ಹಾಗೂ ಅಕ್ರಮವಾಗಿ ಕಡಿದ 96 ಮರಗಳನ್ನು ಅರಣ್ಯ ಇಲಾಖೆ ವಶ ಪಡಿಸಿಕೊಂಡಿದೆ.

ಮೇಲಾಧಿಕಾರಿಗಳ ಆದೇಶದಂತೆ ಅರಣ್ಯಾಧಿಕಾರಿ ವಿಜಯಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ. ಈ ಕುರಿತು ಮೂಡಿಗೆರೆಯ ಶಾಸಕರಾದ ಎಮ್. ಪಿ   ಕುಮಾರಸ್ವಾಮಿ ಅವರು ಅರಣ್ಯ ಸಚಿವರಿಗೆ ಕೂಡಲೇ ವಿಜಯಕುಮಾರ್ ಅವರನ್ನು ಅಮಾನತುಗೊಳಿಸಬೇಕೆಂದು ಆಗ್ರಹಿಸಿದ್ದರು.