ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದ ಪುನರ್​ ರಚನೆ ಆಗಿದ್ದು, 43 ಹೊಸ ಹಾಗೂ ಹಳೆಯ ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. 
ಕರ್ನಾಟಕದಿಂದ ಒಟ್ಟು 4 ನಾಯಕರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿದೆ. ಇದೀಗ ನೂತನ ಸಚಿವರ ಖಾತೆ ಹಂಚಿಕೆ ಪಟ್ಟಿ ಬಿಡುಗಡೆಯಾಗಿದೆ.

ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಕೃಷಿ ರಾಜ್ಯ ಸಚಿವರ ಖಾತೆ ದೊರಕಿದೆ.