ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಮೀನಿಗೆ ಹಾಕಿದ್ದ ವಿದ್ಯುತ್ ಬೇಲಿ ಸ್ಪರ್ಶಿಸಿ ಒಂಟಿಸಲಗ ಮೃತಪಟ್ಟ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಗಾಳಿಪೂಜೆ ಗ್ರಾಮದಲ್ಲಿ ನಡೆದಿದೆ.

ಕಾಡಿನ ಪ್ರಾಣಿಗಳ ಉಪಟಳವನ್ನು ತಪ್ಪಿಸಲು ಜಮೀನಿಗೆ ಹಾಕಲಾಗಿದ್ದ ವಿದ್ಯುತ್ ಬೇಲಿ ತಗುಲಿ ಸುಮಾರು 25 ವರ್ಷದ ಒಂಟಿ ಸಲಗ ಸಾವನಪ್ಪಿದೆ.

ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಜಮೀನಿನ ಮಾಲೀಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಈ ಹಿಂದೆಯೂ ಅನೇಕ ಪ್ರಾಣಿಗಳು ವಿದ್ಯುತ್ ತಗುಲಿ ಸಾವನಪ್ಪಿರುವ ಪ್ರಕರಣಗಳು ಜಿಲ್ಲೆಯಲ್ಲಿ ದಾಖಲಾಗಿದೆ.