ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಅಪ್ರಾಪ್ತೆಯೋರ್ವಳ ಮೇಲೆ ಅತ್ಯಾಚಾರ ನಡೆದ ಪ್ರಕರಣವೊಂದು ಬೆಳಕಿಗೆ ಬಂದಿದೆ. 

ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದಿದೆ. 

ಸಂತ್ರಸ್ತೆಯು ತನ್ನ ಪ್ರಿಯಕರನ ಮನೆಗೆ ಬಂದಿದ್ದಳು, ಆ ಸಮಯದಲ್ಲಿ ಪ್ರಿಯಕರನು ಮನೆಯಲ್ಲಿ ಇರುವುದಿಲ್ಲ, ಈ ಸಂಧರ್ಭದಲ್ಲಿ ಪ್ರಿಯಕರನ ತಂದೆಯೇ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಆರೋಪಿಯು ಕಡಬಗೆರೆ ಊರಿನವನು ಎಂದು ತಿಳಿದುಬಂದಿದ್ದು, ಈ ಹಿಂದೆಯೂ ಹಲವು ಗಂಭೀರ ಆರೋಪ ಪ್ರಕರಣಗಳಲ್ಲಿ ಜೈಲು ಪಾಲಾಗಿದ್ದನು, ಈ ಕುರಿತು ತನಿಖೆ ಪೂರ್ಣಗೊಂಡ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿದುಬಂದಿದೆ. 

ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಸೆರೆಮನೆಯಲ್ಲಿ ಇರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ತನಿಖೆಯು ಪೂರ್ಣಗೊಂಡ ನಂತರ ಇನ್ನಷ್ಟು ಮಾಹಿತಿ ಲಭ್ಯವಾಗಲಿದೆ ಎಂದು ತಿಳಿದುಬಂದಿದೆ.