ಚಿಕ್ಕಮಗಳೂರು : ಹೇಮಾವತಿ ನದಿ ತೀರದಲ್ಲಿ ಅಳಿವಿನಂಚಿನಲ್ಲಿರುವ ಅಪರೂಪದ ಪ್ರಾಣಿ ಹುಲಿ ಬೆಕ್ಕು ಸಾವನ್ನಪ್ಪಿದೆ.

ಇದನ್ನೂ ಓದಿ : ಶೃಂಗೇರಿಯಲ್ಲಿ ಭೀಕರ ಸರಣಿ ಅಪಘಾತ; ಓರ್ವ ಸಾವು, ಹಲವರು ಆಸ್ಪತ್ರೆಗೆ ದಾಖಲು

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ನಲ್ಲಿ ಈ ಘಟನೆ ಸಂಭವಿಸಿದ್ದು ಅಪರೂಪದ ಪ್ರಾಣಿಯನ್ನು ಕಂಡು ಎಲ್ಲರೂ ಒಮ್ಮೆ ಅಚ್ಚರಿಪಟ್ಟಿದ್ದಾರೆ. ಬೇರೆ ಪ್ರಾಣಿಗಳನ್ನು ಬೆನ್ನಟ್ಟಿ ಬಂದು ಸಾವನ್ನಪ್ಪಿರಬಹುದು ಎಂದು ಅಂದಾಜಿಸಲಾಗಿದೆ. ಅತ್ಯಂತ ಅಪರೂಪದ ಪ್ರಾಣಿಯಾದ ಹುಲಿ ಬೆಕ್ಕನ್ನು ನೋಡಿದ ಸ್ಥಳೀಯರು ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ನಂತರದಲ್ಲಿ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಪ್ರಾಣಿಯನ್ನು ನೋಡಿದ್ದಾರೆ ಹಾಗೂ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಗ್ರಾಮಸ್ಥರು ಹಾಗೂ ಕೆಲ ಸ್ಥಳೀಯರು ಅಪರೂಪದ ಪ್ರಾಣಿಯನ್ನು ನೋಡಲು ಆಗಮಿಸಿದ್ದರು.

ತನು ಕೊಟ್ಟಿಗೆಹಾರ, ವರದಿಗಾರರು