ಚಿಕ್ಕಮಗಳೂರು : ಮಲೆನಾಡು ಭಾಗದ ಜನರನ್ನು ಅನೇಕ ಸಮಯಗಳಿಂದ ಆತಂಕಕ್ಕೀಡು ಮಾಡಿದ್ದ ಚಿರತೆಯು ಅರಣ್ಯ ಅಧಿಕಾರಿಗಳು ಇಟ್ಟಿದ್ದ ಬೋನಿಗೆ ಬಿದ್ದು ಸೆರೆಯಾಗಿದೆ, ಈ ಮೂಲಕ ಮಲೆನಾಡು ಭಾಗದ ಜನರು ನಿರ್ಭಯವಾಗಿ ಓಡಾಡಲು ತಮ್ಮ ಚಟುವಟಿಕೆಗಳನ್ನು ನಡೆಸಲು ಸಹಾಯಕವಾಗುವ ಉತ್ತಮ ಸ್ಥಿತಿ ನಿರ್ಮಾಣವಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ವೈ.ಮಲ್ಲಾಪುರ ಗ್ರಾಮದಲ್ಲಿ ಕಳೆದ ಕೆಲ ತಿಂಗಳುಗಳಿಂದ ಚಿರತೆ ಅಲ್ಲಲ್ಲಿ ಕಾಣಿಸುತ್ತಿತ್ತು. ಇದರಿಂದಾಗಿ ಸುತ್ತ ಮುತ್ತಲಿನ ಗ್ರಾಮಸ್ಥರು ಬಹಳಷ್ಟು ಆತಂಕಕ್ಕೀಡಾಗಿದ್ದರು. ಅರಣ್ಯ ಇಲಾಖೆಯ ಸಿಬ್ಬಂದಿಗಳು ಅನೇಕ ಸಮಯದಿಂದ ಚಿರತೆಯನ್ನು ಹಿಡಿಯುವ ಸಲುವಾಗಿ ಪ್ರಯತ್ನ ನಡೆಸಿದ್ದರು. 

ಇದನ್ನೂ ಓದಿ :ಕಾಫಿನಾಡಿನಲ್ಲಿ ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ ಬೈಕ್ ಸವಾರನ ದುರ್ಮರಣ

ಕಡೂರಿನ ವೈ.ಮಲ್ಲಾಪುರ ಗ್ರಾಮದಲ್ಲಿರುವ ಕೆರೆಯ ಸಮೀಪ ಚಿರತೆಯನ್ನು ಹಿಡಿಯುವ ಸಲುವಾಗಿ ಬೋನನ್ನು ಇರಿಸಲಾಗಿತ್ತು, ಕೊನೆಗೂ ಚಿರತೆ ಬೋನಿಗೆ ಬಿದ್ದು ಸೆರೆಯಾಗಿದ್ದು ಆ ಮೂಲಕ ಗ್ರಾಮಸ್ಥರು ಹಾಗೂ ಇಲಾಖೆಯ ಅಧಿಕಾರಿಗಳು ನಿಟ್ಟುಸಿರು ಬಿಡುವಂತಾಗಿದೆ.

ಚಿರತೆಯನ್ನು ಸೆರೆ ಹಿಡಿದ ಅಧಿಕಾರಿಗಳು ಸುರಕ್ಷಿತವಾಗಿ ಅದನ್ನು ಭದ್ರಾ ಅಭಯಾರಣ್ಯಕ್ಕೆ ಬಿಟ್ಟಿದ್ದಾರೆ. ಎಂಟು ವರ್ಷ ಪ್ರಾಯದ ಗಂಡು ಚಿರತೆ ಇದಾಗಿದೆ ಎಂದು ತಿಳಿದುಬಂದಿದೆ.ಇಷ್ಟು ದಿನಗಳ ಕಾಲ ಆತಂಕದಲ್ಲಿದ್ದ ಗ್ರಾಮಸ್ಥರು ಇಂದು ಚಿರತೆ ಸೆರೆ ಸಿಕ್ಕಿ ಬಳಿಕ ನಿಟ್ಟಸಿರು ಬಿಟ್ಟಿದ್ದಾರೆ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಧನ್ಯವಾದ ತಿಳಿಸಿದರು.

ತನು ಕೊಟ್ಟಿಗೆಹಾರ, ವರದಿಗಾರರು.