ಚಿಕ್ಕಮಗಳೂರು : ಕಾಡಾನೆ ದಾಳಿಗೆ ರೈತರು ಕಷ್ಟಪಟ್ಟು ಬೆಳೆದ ಬಾಳೆ ಬೆಳೆನಾಶ ಹೊಂದಿದ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊಳೆಕೊಡಿಗೆ ಗ್ರಾಮದಲ್ಲಿ ಕಾಡಾನೆ ದಾಳಿ ನಡೆಸಿದ ಪರಿಣಾಮ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಅನೇಕ ಬಾಳೆ ಗಿಡಗಳನ್ನು ಆನೆಯು ಮುರಿದು ಹಾಕಿದೆ. ಮೊದಲೇ ಸಂಕಷ್ಟದಲ್ಲಿದ್ದ ರೈತ ಈಗ ಸಂಪೂರ್ಣವಾಗಿ ಬಾಳೆ ಗಿಡಗಳನ್ನು ಕಳೆದುಕೊಂಡಿದ್ದಾನೆ.ಆನೆಯು ಹೊಳೆಕುಡಿಗೆ ಗ್ರಾಮದ ಬಾಸಮ್ಮ, ರಮೇಶ್ ಗೌಡ, ಲಕ್ಷ್ಮಣ ಗೌಡ, ಸತೀಶ್ ಗೌಡ ಎಂಬುವವರ ಕೃಷಿ ಭೂಮಿಗೆ ನುಗ್ಗಿ ಬೆಳೆನಾಶಪಡಿಸಿದೆ.
ಇದನ್ನೂ ಓದಿ : ಹನಿಟ್ರ್ಯಾಪ್ ಮೂಲಕ ಅಮಾಯಕರನ್ನು ವಂಚಿಸುತ್ತಿದ್ದ ತಂಡವನ್ನು ಬಂಧಿಸಿದ ಪೊಲೀಸರು
ಹಾನಿಗೊಳಗಾದ ತೋಟಗಳಿಗೆ ಉಪವಲಯ ಅರಣ್ಯಾಧಿಕಾರಿ ರಂಗನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳೆ ಹಾನಿಯ ಕುರಿತಾಗಿ ಇಲಾಖೆಯ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಹಾಗೂ ಅತೀ ಶೀಘ್ರವಾಗಿ ಸೂಕ್ತ ಪರಿಹಾರ ದೊರಕಿಸಲಾಗುವುದು ಎಂದು ತಿಳಿಸಿದ್ದಾರೆ.
ತನು ಕೊಟ್ಟಿಗೆಹಾರ, ವರದಿಗಾರರು

0 Comments