ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿಯ ಹೊರವಲಯದ ಕಾವಡಿ ಸಮೀಪದ ಉಳುವೆಯಲ್ಲಿ ಕಾರ್ ಹಾಗೂ ಲಾರಿಯ ನಡುವೆ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ.
ಇದನ್ನೂ ಓದಿ : ಕೊಪ್ಪ : ಆಕಸ್ಮಿಕವಾಗಿ ವಿದ್ಯುತ್ ತಗುಲಿ ಸಾವನ್ನಪ್ಪಿದ ಯುವಕ
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಅಡ್ಡಗದ್ದೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳುವೆ ಶಾಲೆಯ ಮುಂದಿನ ತಿರುವಿನಲ್ಲಿ ಕಾರ್ ಹಾಗೂ ಲಾರಿಯ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಐವರ ಪೈಕಿ ಕೆಲವರು ಗಾಯಗೊಂಡಿದ್ದು ಗಾಯಗೊಂಡವರನ್ನು ಸ್ಥಳೀಯರ ಸಹಾಯದೊಂದಿಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಲಾರಿ ಶೃಂಗೇರಿಯಿಂದ ಕೊಪ್ಪದ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಕೊಪ್ಪದಿಂದ ಶೃಂಗೇರಿ ಮಾರ್ಗವಾಗಿ ವೇಗದಿಂದ ಬರುತ್ತಿದ್ದ ಟೂರಿಸ್ಟ್ ವಾಹನವು ಲಾರಿಗೆ ಗುದ್ದಿದೆ ಎನ್ನಲಾಗಿದೆ.
ಸದ್ಯ ಅಪಘಾತಕ್ಕೀಡಾದವರು ಪ್ರಾಣಾಪಾಯದಿಂದ ಪಾರಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳೀಯರು ಕೂಡಲೇ ಘಟನಾ ಸ್ಥಳಕ್ಕೆ ತೆರಳಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲು ಸಹಕರಿಸಿದ್ದಾರೆ.





0 Comments