ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ವಿಐಎಸ್ಎಲ್ ಕ್ವಾಟರ್ಸ್ ಆವರಣದಲ್ಲಿ ಇಂದು ಬೆಳಗ್ಗೆ ಚಿರತೆಯ ಓಡಾಟವನ್ನು ಸಾರ್ವಜನಿಕರು ಕಂಡು ಆತಂಕಕ್ಕೀಡಾಗಿದ್ದರು. ಕಾಣಿಸಿಕೊಂಡಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಅತೀ ವೇಗದ ಕಾರ್ಯಾಚರಣೆಯ ಮೂಲಕ ಸೆರೆಹಿಡಿದು ಜನರ ಆತಂಕವನ್ನು ನೀಗಿಸಿದ್ದಾರೆ.
ಇಂದು ಬೆಳಿಗ್ಗೆ ಕಾಣಿಸಿಕೊಂಡಿದ್ದ ಚಿರತೆಯನ್ನು ಶಿವಮೊಗ್ಗದ ವನ್ಯಜೀವಿ ವಿಭಾಗದ ವೈದ್ಯ ಡಾ. ವಿನಯ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಅರವಳಿಕೆ ನೀಡಿದ ಬಳಿಕ, ಚಿರತೆಯನ್ನು ಬೋನ್ ನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಸೆರೆ ಹಿಡಿದಿದ್ದಾರೆ. ಇದರಲ್ಲೂ ಡಾ.ವಿನಯ್ ಅವರು ಯಾವುದೇ ಅಂಜಿಕೆಯಿಲ್ಲದೆ ಧೈರ್ಯ ತೋರಿ 10 ಮೀ. ಅಂತರದಲ್ಲೇ ಚಿರತೆಗೆ ಅರವಳಿಕೆ ಮದ್ದು ನೀಡಿದ್ದಾರೆ.
ಇಂದು ಮುಂಜಾನೆ ಚಿರತೆಯನ್ನು ಕಂಡಿದ್ದ ಸ್ಥಳೀಯರು ಭಯ ಭೀತರಾಗಿದ್ದರು ಮುಂಜಾಗ್ರತಾ ಕ್ರಮವಾಗಿ ಸಮೀಪದ ಸಾಯಿಬಾಬಾ ಶಾಲೆಗೆ ರಜೆಯನ್ನೂ ನೀಡಲಾಗಿತ್ತು.
ಚಿರತೆ ಸೆರೆಸಿಕ್ಕ ಹಿನ್ನೆಲೆ ಆತಂಕಕ್ಕೊಳಗಾಗಿದ್ದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಸೆರೆಯಾದ ಚಿರತೆ ಸುಮಾರು 5-6 ವರ್ಷದ ಗಂಡು ಚಿರತೆಯಾಗಿದ್ದು, ಅದಕ್ಕೆ ನೀಡಿರುವ ಅರವಳಿಕೆ ಇಳಿದ ನಂತರದಲ್ಲಿ, ಹಿರಿಯ ಅಧಿಕಾರಿಗಳ ನಿರ್ದೇಶನದ ಬಳಿಕದಲ್ಲಿ ಭದ್ರಾ ಅಭಯಾರಣ್ಯದ ವ್ಯಾಪ್ತಿಯ ಕಾಡಿಗೆ ಬಿಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಶಾಸಕರು ಸಂಸದರು ವಿಫಲರಾಗಿದ್ದಾರೆ : ಟಿ.ಸಿ ರಾಜೇಂದ್ರ
ಶೃಂಗೇರಿ : ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕುಂಠಿತಗೊಂಡಿದೆ, ಅಧಿಕಾರ ಹೊಂದಿದ ಶಾಸಕರು ಹಾಗೂ ಸಂಸದರು ಜನರಿಗೆ ಸೂಕ್ತವಾದ ಅಭಿವೃದ್ದಿಕಾರ್ಯ ಹಾಗೂ ನ್ಯಾಯ ಒದಗಿಸುವಲ್ಲಿ ವಿಫಲರಾಗಿದ್ದಾರೆ ಎಂದು ಜನತಾ ಪಕ್ಷದ ಪದಾಧಿಕಾರಿಗಳು ತಿಳಿಸಿದರು.
ಶೃಂಗೇರಿಯ ಕೆವಿಆರ್ ರಸ್ತೆಯಲ್ಲಿರುವ ಹೋಟೆಲ್ ಅದ್ವೈತ್ ಲ್ಯಾನ್ಸರ್ ನ ಸಭಾಂಗಣದಲ್ಲಿ ಆಯೋಜಿಸಿದ್ದ ಕ್ಷೇತ್ರ ಜನತಾ ಪಕ್ಷದ ಅಧಿಕಾರ ಪದಗ್ರಹಣ ಸಮಾರಂಭದಲ್ಲಿ ಕ್ಷೇತ್ರದ ಅಭಿವೃದ್ದಿಯ ಕುರಿತು ಮಾತನಾಡಿದ ಜನತಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಸಿ ರಾಜೇಂದ್ರ ಕ್ಷೇತ್ರದ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಶಾಸಕರು ಹಾಗೂ ಸಂಸದರು ವಿಫಲರಾಗಿದ್ದಾರೆ. ಅತ್ಯವಶ್ಯಕವಾದ ನೂರು ಹಾಸಿಗೆಗಳ ಆಸ್ಪತ್ರೆ, 110 ಕೆ.ವಿ ವಿದ್ಯುತ್ ಸ್ಥಾವರ, ಕುದುರೆಮುಖ ರಾಷ್ಟ್ರೀಯ ಉದ್ಯಾನವನದೊಳಗಿರುವ ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ದಿ ಕುರಿತಾದ ಸಮಸ್ಯೆ, 24 ಗಂಟೆ ಕುಡಿಯುವ ನೀರು ಸೇರಿದಂತೆ ಈ ಭಾಗದ ಜನರಿಗೆ ಗಂಭೀರವಾಗಿ ಕಾಡುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಂಪೂರ್ಣವಾಗಿ ವಿಫಲರಾಗಿದ್ದಾರೆ, ಅವರ ನಿರ್ಲಕ್ಷ್ಯದಿಂದಾಗಿ ಅನೇಕ ಸಮಸ್ಯೆಗಳು ತಲೆದೋರಿದೆ ಎಂದರು.
ಅಂತೆಯೇ ಈ ಬಾರಿ ಜನರು ಮೂರೂ ಪಕ್ಷಗಳನ್ನು ಬದಿಗಿಟ್ಟು ನಮ್ಮ ಜನತಾ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂಬ ಧೃಢ ವಿಶ್ವಾಸವಿದೆ ಮುಂದಿನ ಚುನಾವಣೆಯಲ್ಲಿ ಯಾವ ಪಕ್ಷವೂ ಸಂಪೂರ್ಣ ಬಹುಮತಗಳಿಸಲು ಸಾಧ್ಯವಿಲ್ಲ ಕನಿಷ್ಠ 23 ಶಾಸಕರನ್ನು ಈ ಬಾರಿ ವಿಧಾನಸಭೆಗೆ ಕಳುಹಿಸುವುದು ಜನತಾ ಪಕ್ಷದ ಧೃಢ ಸಂಕಲ್ಪವಾಗಿದೆ ಎಂದರು ಹಾಗೂ ಈ ನಿಟ್ಟಿನಲ್ಲಿ ಸಂಪೂರ್ಣವಾಗಿ ಶ್ರಮವಹಿಸುವುದಾಗಿ ತಿಳಿಸಿದರು.
ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ :
https://forms.gle/APPtk8M3ZDk2oMka6
ಜನತಾ ಪಕ್ಷದ ಕ್ಷೇತ್ರಾಧ್ಯಕ್ಷರಾಗಿ ಆಯ್ಕೆಗೊಂಡ ಕೆ.ಎಸ್ ವೆಂಕಪ್ಪಾಚಾರ್ಯ ರಾಜ್ಯದಲ್ಲಿ ನಾಲ್ಕನೇ ಶಕ್ತಿಯಾಗಿ ಜನತಾ ಪಕ್ಷ ಹೊರಹೊಮ್ಮಲಿದ್ದು ಶೃಂಗೇರಿ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಜನತಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಸಿ ರಾಜೇಂದ್ರ, ರಾಜ್ಯ ಉಪಾಧ್ಯಕ್ಷ ಹೊನ್ನೇಗೌಡ, ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ರಜಿತ್ ಗೌಡ ಬೇಸೂರು, ಮೈಸೂರು ಜಿಲ್ಲಾಧ್ಯಕ್ಷ ರಾಮಕೃಷ್ಣ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

.jpg)




0 Comments