ಕೊಡಗು : (ನ್ಯೂಸ್ ಮಲ್ನಾಡ್ ವರದಿ) ಆನೆಯೊಂದು ಕಾಫಿ ತೋಟದಲ್ಲಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಕೊಡಗು ಜಿಲ್ಲೆಯ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಸಮೀಪದಲ್ಲಿರುವ ಬಾಳೆಲೆ ವ್ಯಾಪ್ತಿಯ ಸುಳುಗೋಡುವಿನ ಕಾಫಿ ತೋಟದಲ್ಲಿ ಆನೆಯು ಮೃತಪಟ್ಟಿದೆ.
ಮೃತಪಟ್ಟಿರುವುದು ಹೆಣ್ಣಾನೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದು ಆನೆಯ ಸಾವಿಗೆ ಕಾರಣಗಳೇನು ಎಂದು ಆನೆಯ ಮರಣೋತ್ತರ ಪರೀಕ್ಷೆಯ ನಂತರದಲ್ಲಿ ತಿಳಿಯಲಿದೆ. 



ಘಟನಾ ಸಂಬಂಧ ತಿತಿಮತಿ ವಲಯದ ಅರಣ್ಯ ಅಧಿಕಾರಿಗಳಾದ ಎಸಿಎಫ್ ಉತ್ತಪ್ಪ, ಆರ್.ಎಫ್ ಒ ಅಶೋಕ್ ಹುನಗುಂದ ಚೇತನ ಅವರು ಸೇರಿದಂತೆ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆಯನ್ನು ನಡೆಸಿದ್ದಾರೆ. 

ಚಿಪ್ಪು ಹಂದಿಯ ಚಿಪ್ಪನ್ನು ಮಾರಾಟ ನಡೆಸಲು ಯತ್ನಿಸಿದ ಇಬ್ಬರು ಸಿಐಡಿ ಪೊಲೀಸರ ಬಲೆಗೆ ; ಚಿಪ್ಪನ್ನು ವಶಕ್ಕೆ ಪಡೆದ ಅಧಿಕಾರಿಗಳು 

ಕೊಡಗು : ಅಕ್ರಮವಾಗಿ ಚಿಪ್ಪು ಹಂದಿಯ ಚಿಪ್ಪನ್ನು ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರನ್ನು ಪೊಲೀಸರು ಕಾರ್ಯಾಚರಣೆಯ ಮೂಲಕ ಬಂಧಿಸಿದ್ದಾರೆ. 

ಕೊಡಗಿನ ತಾಳತ್ ಮನೆ ಜಂಕ್ಷನ್ ಬಳಿಯಲ್ಲಿ ಈ ಕಾರ್ಯಾಚರಣೆಯನ್ನು ನಡೆಸಿರುವ ಸಿಐಡಿ ಪೊಲೀಸ್ ಅರಣ್ಯ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ.

ಬಂಧಿತರನ್ನು ಇಮ್ತಿಯಾಜ್ ಹಾಗೂ ಬಿ.ಮನೋಜ್ ಎಂದು ಗುರುತಿಸಲಾಗಿದೆ. ಈ ಇಬ್ಬರು ಆರೋಪಿಗಳು ಚಿಪ್ಪು ಹಂದಿಯ ಚಿಪ್ಪನ್ನು ಮಾರಾಟ ನಡೆಸಲು ತಯಾರಾಗಿದ್ದರು ಎನ್ನಲಾಗಿದೆ. ಬಂಧಿತರಿಂದ 17.50 ಕೆಜಿ ತೂಕದ ಮುಳ್ಳು ಹಂದಿ ಚಿಪ್ಪನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಈ ಕಾರ್ಯಾಚರಣೆಯಲ್ಲಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಪಿಎಸೈ ಸಿ.ಯು ಸವಿ ಮತ್ತು ಸಿಬ್ಬಂದಿಗಳು ಭಾಗಿಯಾಗಿದ್ದರು.

ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ :