ಹಾಸನ : (ನ್ಯೂಸ್ ಮಲ್ನಾಡ್ ವರದಿ ) ಅಕ್ರಮವಾಗಿ ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಕಾರ್ಯಾಚರಣೆಯ ಮೂಲಕ ಹಾಸನದ ಪೊಲೀಸರು ಬಂಧಿಸಿ ಜೂಜಾಡುತ್ತಿದ್ದವರ ಬಳಿಯಿದ್ದ ಹಣವನ್ನು ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಹಾಸನ ತಾಲೂಕಿನ ಗವೇನಹಳ್ಳಿ ಗ್ರಾಮದ ಬಳಿಯಲ್ಲಿ ಜೂಜಾಡುತ್ತಿದ್ದ ಸುರೇಶ್, ಸೂರ್ಯನಾರಾಯಣ, ವಸಂತ್ ಕುಮಾರ್, ಯೋಗೇಶ್, ನಾಗೇಶ್ ಎಂಬುವವರನ್ನು ದಸ್ತಗಿರಿ ಮಾಡಿಕೊಂಡು, ಜೂಜಾಡಲು ಇಟ್ಟುಕೊಂಡಿದ್ದ 3680 ರೂಪಾಯಿ ನಗದನ್ನು ಪೊಲೀಸರು ವಶಕ್ಕೆ ಪಡೆದು ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಜಿಲ್ಲೆಯ ವಿವಿಧ ಭಾಗಗಳಲ್ಲಿ ಜನರು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದು ಈ ಕುರಿತು ಕಾರ್ಯಾಚರಣೆ ನಡೆಸಿರುವ ಪೊಲೀಸರು ಯಶಸ್ವಿಯಾಗಿ ಆರೋಪಿಗಳನ್ನು ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ. ಈ ಕುರಿತಾಗಿ ಎಚ್ಚರಿಕೆ ನೀಡಿರುವ ಪೊಲೀಸರು ಸಾರ್ವಜನಿಕರು ಇಂತಹ ಕೃತ್ಯಗಳಲ್ಲಿ ಭಾಗಿಯಾಗಬಾರದು ಹಾಗೂ ಈ ರೀತಿಯ ಚಟುವಟಿಕೆಗಳಲ್ಲಿ ಯಾರಾದರೂ ಭಾಗಿಯಾಗಿರುವುದು ಕಂಡುಬಂದಲ್ಲಿ ತಿಳಿಸುವಂತೆ ಸೂಚಿಸಿದ್ದಾರೆ.
ಘಟನಾ ಸಂಬಂಧ ಹಾಸನದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮಕ್ಕೆ ಅನುವುಮಾಡಿದ್ದಾರೆ.






0 Comments