ರಾಜ್ಯದಲ್ಲಿ ಮುಂದಿನ ಐದಾರು ದಿನಗಳು ಮಳೆಯಾಗುವ ಮುನ್ಸೂಚನೆಯಿದ್ದು, ನೈಋುತ್ಯ ಮುಂಗಾರು ಮಾರುತ ಮರಳುವಿಕೆ, ಅರಬ್ಬಿಸಮುದ್ರ, ಉತ್ತರ ಅಂಡಮಾನ್‌ ಸಮುದ್ರ ಭಾಗ ಮತ್ತು ಬಂಗಾಳ ಕೊಲ್ಲಿಯಲ್ಲಿ ನಿರ್ಮಾಣ ಆಗಿರುವ ಮೇಲ್ಮೈ ಸುಳಿಗಾಳಿಗಳು ಮಳೆಯ ಅಬ್ಬರವನ್ನು ಹೆಚ್ಚಿಸಲಿದೆ ಎಂದು ಹವಾಮಾನ ತಜ್ಞರು ಅಭಿಪ್ರಾಯಿಸಿದ್ದಾರೆ. 

ರಾಜ್ಯದ ಕೆಲವೆಡೆ ತುಂತುರು ಮಳೆ, ಇನ್ನು ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಒಟ್ಟಾರೆ ಮುಂದಿನ ಕೆಲ ದಿನ ರಾಜ್ಯದಲ್ಲಿ ಮಳೆಯ ವಾತಾವರಣ ಇರಲಿದೆ. ಈಗಾಗಲೇ ರಾಜ್ಯದ ಮಲೆನಾಡು ಹಾಗೂ ಬಯಲುಸೀಮೆಯ ಕೆಲ ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುತ್ತಿದ್ದು ಅಲ್ಲಲ್ಲಿ ಕೆಲ ಅವಘಡಗಳು ಮಳೆಯಿಂದಾಗಿ ಸಂಭವಿಸಿದೆ.

ಇದನ್ನೂ ಓದಿ: ಆಂಬುಲೆನ್ಸ್ ಚಾಲಕನ ಮೇಲೆ ಹಲ್ಲೆ; ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿಗಳಿಂದ ಪ್ರತಿಭಟನೆ | ಪ್ರಕರಣ ದಾಖಲಿಸಿಕೊಂಡು ನ್ಯಾಯ ಒದಗಿಸಿಕೊಡುವಂತೆ ಆಗ್ರಹ


ಭಾನುವಾರ ಬೆಳಗ್ಗೆ 8.30 ರವರೆಗೆ ಚಾಮರಾಜನಗರ, ಮಂಡ್ಯ, ಕೊಡಗು, ಹಾಸನ, ದಕ್ಷಿಣ ಕನ್ನಡ, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ಕಲಬುರಗಿ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಇರಲಿದೆ. ಭಾನುವಾರ ಬೆಳಗ್ಗೆಯಿಂದ ಸೋಮವಾರದ ತನಕ ಚಾಮರಾಜನಗರ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ದಾವಣಗೆರೆ, ಚಿತ್ರದುರ್ಗ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ ಮತ್ತು ಕಲಬುರಗಿ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಪ್ರಕಟಿಸಲಾಗಿದೆ. ಆ ಬಳಿಕವೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಂಭವವಿದೆ. 

ಚಿಕ್ಕಮಗಳೂರು ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲ ಪ್ರದೇಶದಲ್ಲಿ ವಿಪರೀತವಾಗಿ ಮಳೆಯಾಗಿದ್ದು ಜನರು ಬೆಳೆಯನ್ನು ಉಳಿಸಿಕೊಳ್ಳಲು ಹರಸಾಹಸಪಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.


ಬುರ್ಖಾ ಧರಿಸಿದ ಮಹಿಳೆಯಿಂದ ಫೈನಾನ್ಸ್ ಕಂಪನಿಗೆ ಹಣ ವಂಚನೆ :

ಕೊಡಗು: ಬುರ್ಖಾ ಧರಿಸಿದ ಮಹಿಳೆ ಬೇರೆಯವರ ಹೆಸರಿನಲ್ಲಿ ಸಾಲ ಪಡೆದುಕೊಂಡು ಕಂಪನಿಯನ್ನು ಸಂಕಷ್ಟಕ್ಕೆ ಸಿಲುಕಿಸಿರುವ ಘಟನೆ ಕೊಡಗಿನಲ್ಲಿ ನಡೆದಿದೆ. 

ಮೈಕ್ರೋಫೈನಾನ್ಸ್ ಕಂಪೆನಿಯು ಸಾಲ ನೀಡುವ ವಿಚಾರದಲ್ಲಿ ಮಾಡಿದ ಎಡವಟ್ಟಿನಿಂದಾಗಿ ಕಂಪನಿಯೇ ವಂಚನೆಗೆ ಒಳಗಾಗಿದೆ. ಬುರ್ಖಾ ಧರಿಸಿದ ಮಹಿಳೆಯು ನಕಲಿ ದಾಖಲೆ ನೀಡಿ ಸಾಲ ಪಡೆದಿದ್ದಾಳೆ. ಆದರೆ ದಾಖಲೆಯಲ್ಲಿರುವ ಫೋಟೋ ಮತ್ತು ಮಹಿಳೆಯ ಮುಖದ ವ್ಯತ್ಯಾಸವನ್ನು ಗುರುತಿಸದೆ ನೇರವಾಗಿ ಲಕ್ಷಾಂತರ ರೂಪಾಯಿ ಸಾಲ ನೀಡಿದ ಫೈನಾನ್ಸ್ ಕಂಪನಿಗಳು ಸಂಕಷ್ಟಕ್ಕೊಳಗಾಗಿದೆ.  


ಆಶಿಯಾ ಎಂಬಾಕೆ ಕೊಡಗಿನ ಕುಶಾಲನಗರ ಪಟ್ಟಣದಲ್ಲಿನ ಸಮಸ್ತ, ಬೆಲ್ ಸ್ಟಾರ್ ಮೈಕ್ರೋ ಫೈನಾನ್ಸ್ ಕಂಪೆನಿಗಳಿಗೆ ಆಗಮಿಸಿ ತನ್ನದೇ ಹೆಸರಿನ ಬೇರೆಯವರ ಆಧಾರ್ ಕಾರ್ಡ್ ನೀಡಿ ಲಕ್ಷಾಂತರ ಸಾಲ ಮಾಡಿದ್ದಾಳೆ. ಆದರೆ ಫೈನಾನ್ಸ್ ಕಂಪನಿಗಳ ಸಿಬ್ಬಂದಿ ಆಕೆಯ ಬುರ್ಖಾ ತೆಗೆದು ಮುಖ‌ ಪರಿಶೀಲಿಸದೇ ಸಾಲ ಮಂಜೂರು ಮಾಡಿದ್ದಾರೆ. ಪರಿಣಾಮ ಲಕ್ಷಾಂತರ ರೂಪಾಯಿಗಳನ್ನು ಫೈನಾನ್ಸ್ ಕಂಪನಿಗಳು ಕಳೆದುಕೊಂಡಿವೆ.

ಯಾರದ್ದೋ ಹೆಸರಿನಲ್ಲಿ ಇನ್ಯಾರಿಗೋ ಸಾಲ‌ :

ಫೈನಾನ್ಸ್ ಕಂಪೆನಿಗಳಿಗೆ ಬುರ್ಖ ಧರಿಸಿದ ಮಹಿಳೆಯಿಂದ ವಂಂಚನೆ ಎಸಗಲಾಗಿದೆ. ಸರಿಯಾಗಿ ತಪಾಸಣೆ ನಡೆಸದಂತೆ ಯಾರದ್ದೋ ಹೆಸರಿನಲ್ಲಿ ಇನ್ನಾರಿಗೋ ಸಾಲ‌ನೀಡಿ ಕೊಡಗಿನ ಮೈಕ್ರೋಫೈನಾನ್ಸ್ ಕಂಪನಿಗಳು ಎಡವಟ್ಟು ಮಾಡಿಕೊಂಡಿವೆ.

ವಂಚಕಿ ಆಶಿಯಾ ಇದೇ ರೀತಿ ಹಲವು ಫೈನಾನ್ಸ್ ಕಂಪೆನಿಗಳಿಗೆ ವಂಚಿಸಿರುವ ಶಂಕೆ ಸದ್ಯಕ್ಕೆ ವ್ಯಕ್ತವಾಗಿದ್ದು, ಪ್ರಸ್ತುತ ಫೈನಾನ್ಸ್​ ಕಂಪನಿಗಳು ಮಾಡಿದ ತಪ್ಪಿನಿಂದಾಗಿ ವಂಚನೆಗೊಳಗಾದ ಆಧಾರ್ ಕಾರ್ಡ್ ಮಾಲೀಕರು ಪರದಾಡುವಂತಾಗಿದೆ. ತಮಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸುತ್ತಿದ್ದು, ನ್ಯಾಯ ಸಿಗದಿದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಂಚನೆಗೊಳಗಾದ ಮಡಿಕೇರಿ ನಿವಾಸಿ ಆಶಿಯಾ, ಮಿಶ್ರಿಯಾ ಹೇಳಿದ್ದಾರೆ.