ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಒಮಿನಿ ಕಾರ್ ಹಾಗೂ ಜೀಪ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಓಮಿನಿ ಕಾರ್ ಚಾಲನೆ ಮಾಡುತ್ತಿದ್ದ ಚಾಲಕನ ಕಾಲು ತುಂಡಾಗಿರುವ ದುರ್ಘಟನೆ ಇಂದು ಸಂಭವಿಸಿದೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೆಗ್ಗಾರು ಕುಡಿಗೆ ಸಮೀಪದಲ್ಲಿ ಈ ಅಪಘಾತ ಸಂಭವಿಸಿದ್ದು, ಜೀಪ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ ಪರಿಣಾಮ ಓಮಿನಿ ಕಾರನ್ನು ಚಾಲನೆ ಮಾಡುತ್ತಿದ್ದ ಶ್ರೀಧರ್ ಎಂಬುವವರ ಕಾಲು ತುಂಡಾಗಿದೆ, ಅವರ ಪತ್ನಿಯ ಕಾಲಿಗೂ ಪೆಟ್ಟಾಗಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ಫೋನಿನ ಮೂಲಕ ಕೌಟುಂಬಿಕ ಸಮಸ್ಯೆಯನ್ನು ಬಗೆಹರಿಸುವುದಾಗಿ ಲಕ್ಷಾಂತರ ರೂಪಾಯಿ ವಂಚಿಸಲು ಯತ್ನಿಸಿದ ನಕಲಿ ಜ್ಯೋತಿಷಿ ಪೊಲೀಸರ ವಶಕ್ಕೆ



ಶೃಂಗೇರಿಯ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ಒದಗಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ಇಬ್ಬರನ್ನೂ ರವಾನಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಅಪಘಾತದಲ್ಲಿ ನಾಲ್ಕೈದು ಮಂದಿಗೆ ಗಾಯಗಳಾಗಿದ್ದು ಅವರಿಗೆ ಚಿಕಿತ್ಸೆಯನ್ನು ಪೂರೈಕೆ ಮಾಡಲಾಗಿದೆ.  

ಸ್ಥಳೀಯರು ಹಾಗೂ ಇತರೆ ಪ್ರವಾಸಿಗರು ಕೂಡಲೇ ನೆರವಿಗೆ ಧಾವಿಸಿ, ಅಪಘಾತಕ್ಕೀಡಾದ ದಂಪತಿಗಳನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ಸಹಕರಿಸಿದ್ದಾರೆ.